“ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ಮನುವಾದಿಗಳ ಜಾತಿ ಅಸಮಾನತೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ”
• ಸೆಕ್ಯೂಲರ್ ವಾಯ್ಸ್ ಡೆಸ್ಕ್ ನ್ಯೂಸ್ :
ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

