“ಬೆಂಗಳೂರು|ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡುವಂತೆ :ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ.!”

Contents
“ಬೆಂಗಳೂರು|ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡುವಂತೆ :ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ.!”• ಸೆಕ್ಯುಲರ್ ವಾಯ್ಸ್ ಡೆಸ್ಕ್ ನ್ಯೂಸ್ : ಬೆಂಗಳೂರು : ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಕಿಚ್ಚ್ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕನ್ನಡ ಸಿಸ್ ನ್ ಶುರುವಾಗಿ ಒಂದೇ ವಾರಕ್ಕೆ 12ನೇ ಆವೃತ್ತಿಯ ಕನ್ನಡದ ಬಿಗ್ ಬಾಸ್ಗೆ ಸಂಕಷ್ಟ ಎದುರಾಗಿದೆ. ಈ ಕೂಡಲೇ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಕಾರಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿ ಬಿಗ್ ಶಾಕ್ ಕೊಟ್ಟಿದೆ.ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಒಂದು ಅಮ್ಯೂಸ್ಮೆಂಟ್ ಪಾರ್ಕ್ ಅದರಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದೇ ಹೊರಗೆ ಬಿಡಲಾಗುತ್ತಿದೆ. ಅದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯ ಮುಂತಾದ್ದನ್ನು ಆವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂಬ ಆರೋಪ ಇದೆ.ಹೀಗಾಗಿ ಈ ಎಲ್ಲ ಕಾರಣಗಳಿಂದಾಗಿ ಜಾಲಿವುಡ್ ಸ್ಟುಡಿಯೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದಾಗಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ವಿಘ್ನ ಎದುರಾದಂತೆ ಆಗಿದೆ. ಒಂದು ವೇಳೆ ಸೂಕ್ತ ಕ್ರಮ ತೆಗೆದುಕೊಂಡರೆ ಶೋ ನಿಲ್ಲುವ ಸಾಧ್ಯತೆ ಇರುತ್ತದೆ ಆತಂಕ ಸೃಷ್ಟಿಯಾಗಿದೆ.
