LOCAL EXPRESS: “ಕೊಪ್ಪಳ| ಮಕ್ಕಳ ಹಕ್ಕುಗಳ ಸಂಸತ್ತು : ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ”

By admin

“ಕೊಪ್ಪಳ| ಮಕ್ಕಳ ಹಕ್ಕುಗಳ ಸಂಸತ್ತು : ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ”

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌, ಕೊಪ್ಪಳ:

ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ಸಂಸತ್ತು ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನಾ ಸಭೆಯನ್ನು ಭಾನುವಾರ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಅವರು ಉದ್ಘಾಟಸಿ ಮಾತನಾಡಿ, ವಿಧಾನ ಸೌದದಲ್ಲಿ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ, ಯೋಜನೆ, ಕಾರ್ಯಕ್ರಮಗಳ ಬಗ್ಗೆ ಹಾಗೂ ಅಗತ್ಯವಿರುವ ಹೊಸ ಕಾಯ್ದೆಗಳ ಬಗ್ಗೆ ಚರ್ಚೆಯಾಗಲಿ ಎಂಬ ಉದ್ದೇಶದಿಂದ ಸಭೆ ಆಯೋಜಿಸಲಾಯಿತು ಎಂದರು.

ಕಾರ್ಯಕ್ರಮದ ಮುಖ್ಯ ಉದ್ದೇಶ ಆಳುವ ಸರಕಾರಕ್ಕೆ ಮಕ್ಕಳಿಂದ ಮಕ್ಕಳ ಅನುಭವಿಸುತ್ತಿರುವ ಸಮಸ್ಯೆಗಳ ಮಾಡಿಸಿ, ಅಗತ್ಯ ವಿರುವ ಕಾರ್ಯಕ್ರಮ, ಯೋಜನೆಗಳನ್ನು ಅನುಷ್ಟಾನಗೊಳಿಸಲು ಪ್ರೇರೇಪಿತಗೊಳಿಸುವುದಾಗಿದೆ.ಮಕ್ಕಳ ಮೇಲಿನ ಯಾವುದೇ ರೀತಿಯ ಹಲ್ಲೆ, ಕಿರುಕುಳ, ದೌರ್ಜನ್ಯ ಇನ್ನೀತರೆ ಯಾವುದೇ ರೀತಿಯ ಸಂಕಷ್ಟಕ್ಕೊಳಗಾದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಹಾಯವಾಣಿ-1098/112ಗೆ ದೂರನ್ನು ನೀಡಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಎಡಿಸಿ ಸಿದ್ರಾಮೇಶ್ವರ ಅವರು ಮಾತನಾಡಿ, ಪ್ರಜಾಪ್ರಭುತ್ವ ಎಂದರೆ ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರವಾಗಿ ನಡೆಯು ತ್ತದೆ. ಅದೇ ರೀತಿಯ ಮಕ್ಕಳ ಸಂಸತ್ತು ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳಿಗೋಸ್ಕರವಾಗಿ ನಡೆಯುವ ಕಾರ್ಯಕ್ರಮವಾಗಿದೆ. ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಮಕ್ಕಳ ಸಂಸತ್ತು ಕಾರ್ಯಕ್ರಮದಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಉದಾಹರಣೆಗಳು ನಮ್ಮ ಮುಂದಿವೆ. ಮಕ್ಕಳ ಪರವಾಗಿ ಭಾಗವಹಿಸಿದ ನೀವುಗಳೆಲ್ಲರೂ ಸಕ್ರೀಯವಾಗಿ ಭಾಗವಹಿಸಿ ಎಂದು ತಿಳಿಸಿದರು.

ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಸದಸ್ಯ ಸುಭಾನ ಸಾಬ್ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪ್ರಕಾಶ ಕಡಗದ, ಸದಸ್ಯರುಗಳಾದ ಯಮನೂರಪ್ಪ ನಾಯಕ್, ಮಾರುತಿ ಚಾಮಲಾಪುರ, ದಿವ್ಯಾ ಜೋಗಿ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ, ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಪವಾರ, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮಕ್ಕಳು ಭಾಗವಹಿಸಿದ್ದರು.