🔵 LOCAL NEWS :”ಶಹಾಪುರ| ಶರಣಪ್ಪಸಲಾದಪೂರ ಅವರಿಗೆ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆ 22ರಂದು”   

By admin

LOCAL NEWS : “ಶಹಾಪುರ| ಶರಣಪ್ಪಸಲಾದಪೂರ ಅವರಿಗೆ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆ 22ರಂದು”   

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಶಹಾಪುರ:

ಕರ್ನಾಟಕ ಸರ್ಕಾರದ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡು ರಾಜ್ಯ ಸಚಿವ ಸ್ಥಾನಮಾನ ಪಡೆದಿರುವ ಶರಣಪ್ಪ ಸಲಾದಪೂರ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸುವ ಕುರಿತು ಫೆ.22ರಂದು (ಭಾನುವಾರ) ಬೆಳಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಹಿತೈಷಿಗಳು ತಿಳಿಸಿದ್ದಾರೆ.

ಸಭೆಯಲ್ಲಿ ಸಮಾರಂಭದ ರೂಪರೇಷೆಗಳು, ದಿನಾಂಕ ನಿಗದಿ, ಕಾರ್ಯಕ್ರಮದ ವ್ಯವಸ್ಥೆ ಹಾಗೂ ವಿವಿಧ ಜವಾಬ್ದಾರಿಗಳ ಹಂಚಿಕೆ ಕುರಿತು ಚರ್ಚೆ ನಡೆಯಲಿದೆ. ಸಭೆಗೆ ನಗರದ ಗುರು-ಹಿರಿಯರು, ನಾಗರಿಕರು, ರಾಜಕೀಯ ಮುಖಂಡರು, ಸಾಹಿತಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಬುದ್ಧಿಜೀವಿಗಳು, ಯುವಕರು, ರೈತರು, ಉದ್ಯಮಿಗಳು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಎಲ್ಲರ ಸಹಕಾರ ಮತ್ತು ಸಲಹೆಗಳೊಂದಿಗೆ ಅಭಿನಂದನಾ ಸಮಾರಂಭವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ನಡೆಸುವ ಉದ್ದೇಶ ಹೊಂದಿರುವುದಾಗಿ ಆಯೋಜಕರು ತಿಳಿಸಿದ್ದಾರೆ.