🟢  LOCAL EXPRESS : “ಅಫಜಲಪುರ| ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ : ವಾಲ್ಮೀಕಿ ನಾಯಕರ ಸಂಘದಿಂದ ತಹಸೀಲ್ದಾರ್ ರಿಗೆ  ಮನವಿ”  

By admin

  LOCAL EXPRESS : “ಅಫಜಲಪುರ| ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ : ವಾಲ್ಮೀಕಿ ನಾಯಕರ ಸಂಘದಿಂದ ತಹಸೀಲ್ದಾರ್ ರಿಗೆ   ಮನವಿ”

(ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ ವಾಲ್ಮೀಕಿ ನಾಯಕರ ಸಂಘದ ಮುಖಂಡರು ಬುಧವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು).

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಅಫಜಲಪುರ:

ತಾಲೂಕಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ ವಾಲ್ಮೀಕಿ ನಾಯಕರ ಸಂಘದ ಮುಖಂಡರು ಬುಧವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ವಿಭಾಗೀಯ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ (ಮಾಜಿ ಉಪಮಹಾಪೌರರು), ತಾಲೂಕಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಸಂಬಂಧಿತ ಪ್ರಾಧಿಕಾರಗಳು ಕುಲಂಕುಶ ಪರಿಶೀಲನೆ ನಡೆಸಿ, ವಸ್ತುನಿಷ್ಠ ಪಂಚನಾಮೆ ಮೂಲಕ ನಿಜಾಸತ್ಯತೆ ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕೆಲವರು ತಾವೇ ವಾಲ್ಮೀಕಿ ಸಮಾಜದ “ತಳವಾರರು” ಎಂದು ಸುಳ್ಳು ಮಾಹಿತಿ ನೀಡಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲೆ ಒತ್ತಡ ತರುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಪಂಗಡದಲ್ಲಿ ವಾಲ್ಮೀಕಿ ಸಮಾಜದ ಪರ್ಯಾಯ ಪದವಾಗಿ “ತಳವಾರ” ಬಳಕೆಯಲ್ಲಿದ್ದರೂ, ಹಿಂದುಳಿದ ವರ್ಗದಲ್ಲಿಯೂ ಇದೇ ಪದ ಬಳಕೆಯಲ್ಲಿರುವುದರಿಂದ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಿ, ನೈಜ ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಕಲಬುರಗಿ ಜಿಲ್ಲಾಧಿಕಾರಿಗಳ 02-05-2024ರ ಆದೇಶ ಹಾಗೂ ಸರ್ಕಾರದ 07-02-2025ರ ಸ್ಪಷ್ಟ ಸೂಚನೆಯನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಸುಳ್ಳು ಪ್ರಮಾಣ ಪತ್ರಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಭಾಗೀಯ ಯುವ ಘಟಕದ ಡಾ. ರಾಮನಾಯಕ ಅರಳಹಳ್ಳಿ, ಜಿಲ್ಲಾಧ್ಯಕ್ಷ ಶರಣು ಸುಭೇದಾರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.